ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ,
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಸುರೇಶ್ ಕುಮಾರ್.ಎಸ್ ಇವರು ಪುತ್ತೂರು
ಪುರಸಭಾ ಕಛೇರಿಗೆ
ದಿ:12/01/09 ರಂದು ಭೇಟಿ ನೀಡಿ ಪ್ರಗತಿ
ಪರಿಶೀಲಿಸಿದರು. ಪುರಸಭಾ ಕಛೇರಿ ಸಭಾಂಗಣದಲ್ಲಿ ಪುರಸಭಾ ಸದಸ್ಯರು, ಸಿಬ್ಬಂದಿಗಳು.
ಗಣ್ಯವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿ, ಪುತ್ತೂರು ನಗರದ ಅಭಿವೃದ್ಧಿ ಕಾರ್ಯಗಳ
ಕುರಿತು ಚರ್ಚಿಸಲಾಯಿತು.

ದಿ: 15/10/2008ರಂದು ಪುತ್ತೂರು
ಪುರಸಭೆಯ ಶೇ.18ರ ನಿಧಿಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ
ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಪುತ್ತೂರು ಪುರಸಭೆಯ ಸಮುದಾಯ ಭವನದಲ್ಲಿ
ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ
ಸಂಪನ್ಮೂಲ ವ್ಯಕ್ತಿಗಳಿಂದ ಬದುಕು ಶಿಕ್ಷಣ, ಆರ್ಥಿಕ ಸ್ವಾವಲಂಬನೆ, ಆರೋಗ್ಯ ಪರಿಸರ ಸ್ವಚ್ಛತೆ,
ಆತ್ಮವಿಶ್ವಾಸ ವೃದ್ಧಿಸಿಕೊಳ್ಳುವುದು ಹೇಗೆ? ಮತ್ತು ಕೌಶಲ್ಯತೆ ಸಂವಹನ ವ್ಯಕ್ತಿತ್ವ ವಿಕಸನದ
ಕುರಿತು ಮಾಹಿತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರು ಮತ್ತು
ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಹಾಗೂ ಎಲ್ಲ ಪ್ರತಿನಿಧಿಗಳು
ಉಪಸ್ಥಿತರಿದ್ದರು. ಪುರಸಭೆಯ ಸಮುದಾಯ ವ್ಯವಹಾರಗಳ ಅಧಿಕಾರಿ, ಸಮುದಾಯ ಸಂಘಟಕರು ಹಾಗೂ ಪುರಸಭಾ
ಸಿಬ್ಬಂದಿಗಳು ಕಾರ್ಯಕ್ರಮವನ್ನು ನಿರ್ವಹಿಸಿಕೊಟ್ಟರು.

ಪುತ್ತೂರು ಪುರಸಭೆಯಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆಯ
ಕುರಿತು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಬಗ್ಗೆ ಸ್ಪರ್ಧಾ
ಕಾರ್ಯಕ್ರಮಗಳಾದ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ದಿ:
02/10/2008ರಂದು ಪುತ್ತೂರು ಪುರಸಭೆಯ ಪುರಭವನದಲ್ಲಿ ನಡೆಸಲಾಗಿರುತ್ತದೆ. ಈ ಸ್ಪರ್ಧಾ
ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಮುಖ್ಯಸ್ಥರು, ಪುರಸಭಾ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು,
ಸ್ಥಾಯಿ ಸಮಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳು ಹಾಗೂ ಎಲ್ಲ ಪ್ರತಿನಿಧಿಗಳು ಉಪಸ್ಥಿತರಿದ್ದರು.

